ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
ಆಮೋಸ
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
8
  • 1
  • 2
  • 3
  • 4
  • 5
  • 6
  • 7
  • 8
  • 9
1 ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು.
2 ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.
3 ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.
4 ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
5 ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
6 ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
7 ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
8 ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು.
9 ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
10 ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
11 ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
12 ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
13 ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.
14 ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
‹ ›
© 2025 DailyManna.co.in. All rights reserved.