ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
ಯೆಹೆಜ್ಕೇಲನು
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
24
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • 41
  • 42
  • 43
  • 44
  • 45
  • 46
  • 47
  • 48
1 ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
2 ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
3 ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
4 ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ;
5 ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
6 ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.
7 ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
8 ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ;
9 ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
10 ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ.
11 ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
12 ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
13 ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
14 ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
15 ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
16 ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
17 ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
18 ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು.
19 ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು.
20 ಆಮೇಲೆ ನಾನು ಅವರಿಗೆ ಉತ್ತರಿಸಿದೆನು; ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
21 ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
22 ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು.
23 ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ.
24 ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ.
25 ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ
26 ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?
27 ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
‹ ›
© 2025 DailyManna.co.in. All rights reserved.