ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
ಯೋಬನು
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
32
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • 41
  • 42
1 ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು.
2 ಆಗ ರಾಮನ ಬಂಧುವಾದ ಬೂಜ್‌ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
3 ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
4 ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು;
5 ಅವರು ತನಗಿಂತ ಹಿರಿಯರಾಗಿದ್ದರು. ಆ ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು.
6 ಆಗ ಬೂಜ್‌ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.
7 ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.
8 ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
9 ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ.
10 ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು.
11 ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು;
12 ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ.
13 ನಾವು ಜ್ಞಾನವನ್ನು ಕಂಡುಕೊಂಡೆವು; ಮನು ಷ್ಯನಲ್ಲ, ದೇವರು ಅವನನ್ನು ತಳ್ಳುತ್ತಾನೆಂದು ಹೇಳ ಬೇಡಿರಿ.
14 ನನಗೆ ವಿರೋಧವಾಗಿ ಅವನು ನುಡಿ ಗಳನ್ನು ಸಿದ್ಧಮಾಡಲಿಲ್ಲ; ನಿಮ್ಮ ಮಾತುಗಳಿಂದ ನಾನು ಅವನಿಗೆ ಉತ್ತರ ಕೊಡುವದಿಲ್ಲ.
15 ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು.
16 ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ.
17 ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು.
18 ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.
19 ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ.
20 ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.
21 ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.
22 ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
‹ ›
© 2025 DailyManna.co.in. All rights reserved.