ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
ಯೋವೇಲ
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
1
  • 1
  • 2
  • 3
1 ಪೆತೂವೇಲನ ಮಗನಾದ ಯೋವೇಲನಿಗೆ ಬಂದ ಕರ್ತನ ವಾಕ್ಯವು.
2 ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ; ಇದು ನಿಮ್ಮ ದಿವಸಗಳಲ್ಲಾದರೂ ನಿಮ್ಮ ತಂದೆಗಳ ದಿವಸಗಳಲ್ಲಾದರೂ ಉಂಟಾಯಿತೋ?
3 ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
4 ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
5 ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
6 ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.
7 ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
8 ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
9 ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
10 ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
11 ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
12 ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
13 ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
14 ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
15 ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
16 ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
17 ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
18 ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
19 ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.
20 ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
›
© 2025 DailyManna.co.in. All rights reserved.